ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂತಾರದಲ್ಲಿ ಅಭಿನಯಿಸುವ ಅವಕಾಶ

05:53 PM Dec 12, 2023 IST | Samyukta Karnataka

ಮಂಗಳೂರು: ಆಭೂತಪೂರ್ವ ಯಶಸ್ಸು ಪಡೆದ ‘ಕಾಂತಾರ ಒಂದು ದಂತಕಥೆ’ಯ ಮೊದಲ ಅಧ್ಯಾಯದ ಚಿತ್ರೀಕರಣಕ್ಕೆ ನಟ ರಿಷಬ್ ಶೆಟ್ಟಿ ಸಿದ್ಧತೆ ಆರಂಭಿಸಿದ್ದು, ಈ ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಿಷನ್ ಕರೆಯಲಾಗಿದೆ.
ಇತ್ತೀಚೆಗಷ್ಟೇ ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿತ್ತು. ‘ಕಾಂತಾರ ಒಂದು ದಂತಕಥೆ’ಯ ‘ಕಾಂತಾರ’ದ ಪ್ರೀಕ್ವೆಲ್ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ. ಕರಾವಳಿ ಭಾಗದ ಕಥೆ ಚಿತ್ರದಲ್ಲಿರುವುದರಿಂದ ಚಿತ್ರೀಕರಣ ಕರಾವಳಿಯಲ್ಲಿ ನಡೆಯಲಿದೆ. ಕಾಂತಾರದಲ್ಲಿ ಕನ್ನಡದ ಪ್ರತಿಭೆಗಳಿಗೆ ಅವಕಾಶ ನೀಡಿದ್ದ ರಿಷಬ್ ‘ಕಾಂತಾರ ಒಂದು ದಂತ ಕಥೆಯಲ್ಲೂ
ಕನ್ನಡದ ಕಲಾವಿದರಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ. ಮತ್ತಷ್ಟು ಹೊಸ ಪ್ರತಿಭೆಗಳನ್ನು, ರಂಗಭೂಮಿ ಕಲಾವಿದರನ್ನು ಈ ಭಾಗದಲ್ಲಿ ಹೆಚ್ಚಾಗಿ ಪರಿಚಯಿಸುವ ನಿಟ್ಟಿನಲ್ಲಿ ಆಡಿಷನ್ ಕರೆಯಲಾಗಿದೆ. ಆಸಕ್ತರು ಞಚಿಟಿಣಚಿಡಿಚಿ.ಜಿiಟmಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ದಾಖಲಿಸಬಹುದು. ಡಿ.೧೪ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

Next Article