ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಣೆಯಾದ ಸದಸ್ಯರು ಪಟ್ಟಣ ಪಂಚಾಯತಿಯಲ್ಲಿ ಧೀಡಿರ ಪ್ರತ್ಯಕ್ಷ

11:37 AM Sep 02, 2024 IST | Samyukta Karnataka

ನರೇಗಲ್ಲ : ಪಟ್ಟಣ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸೆ. ೨ರಂದು ನಿಗದಿಯಾದ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಬಿಜೆಪಿಯ ೬ ಸದಸ್ಯರು ನಾಪತ್ತೆಯಾಗಿದ್ದರು.
ಸಂಪರ್ಕಕ್ಕೆ ಸಿಗದ ಆರು ಜನ ಸದಸ್ಯರಲ್ಲಿ ಇಬ್ಬರು ಸೋಮವಾರ ಬೆಳಿಗ್ಗೆ 10:40 ಕ್ಕೆ ಪಟ್ಟಣ ಪಂಚಾಯತಿಗೆ ಕಾಂಗ್ರೆಸ್ ಮುಖಂಡರ ಜತೆಗೆ ದೌಡಾಯಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ ಫಕೀರಪ್ಪ ಮಳ್ಳಿ, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ಕೋರಧಾನ್ಯಮಠ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆಯಲ್ಲಿ ಬಂದ ಬಿಜೆಪಿ ಪಕ್ಷದ ಸದಸ್ಯರಾದ ಫಕೀರಪ್ಪ ಮಳ್ಳಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕುಮಾರಸ್ವಾಮಿ ಕೋರಧಾನ್ಯಮಠ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ, ಗಜೇಂದ್ರಗಡ ತಹಶಿಲ್ದಾರ ಕಿರಣ ಕುಲಕರ್ಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ಬಿಜೆಪಿ ಪಕ್ಷದ ಸದಸ್ಯರು ಮತ್ತೇ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆಯಲ್ಲಿ ಕಾರಿನಲ್ಲಿ ಹೊರಟರು. ಈವೇಳೆ ಪ.ಪಂ ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ರೋಣ ಸಿಪಿಐ ಎಸ್.ಎಸ್ ಬಿಳಗಿ, ಪಿಎಸ್ಐ ಐಶ್ವರ್ಯ ನಾಗಳಾರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ ಕೈಗೊಂಡಿದ್ದಾರೆ.

Tags :
#Bjp#gadag#ಗದಗ#ನರೇಗಲ್ಲ#ಪಟ್ಟಣ ಪಂಚಾಯತಿcongress
Next Article