For the best experience, open
https://m.samyuktakarnataka.in
on your mobile browser.

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ

04:27 PM Nov 19, 2023 IST | Samyukta Karnataka
ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ

ಬೆಂಗಳೂರು: ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್‌ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿಯವರ ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.
ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ:
ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.