For the best experience, open
https://m.samyuktakarnataka.in
on your mobile browser.

ಕುರ್ಚಿ ಉಳಿಸಿಕೊಳ್ಳಲು ಇನ್ನಿಲ್ಲದ ದುಸ್ಸಾಹಸ

10:38 AM Jul 24, 2024 IST | Samyukta Karnataka
ಕುರ್ಚಿ ಉಳಿಸಿಕೊಳ್ಳಲು ಇನ್ನಿಲ್ಲದ ದುಸ್ಸಾಹಸ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ ನಡೆದಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇಂದು ED ವಿರುದ್ಧ ಕಂಪ್ಲೇಂಟ್ ಮಾಡಿರುವ ಕಲ್ಲೇಶ್ ಬಿ ಎಂಬ ಅಧಿಕಾರಿಯನ್ನು ಕಳೆದ ತಿಂಗಳು ಭ್ರಷ್ಟಾಚಾರದ ಆರೋಪದಡಿ ರಾಜ್ಯ ಸರ್ಕಾರ ಅಮಾನತ್ತಿನಲ್ಲಿಟ್ಟಿತ್ತು.
ED ತನಿಖೆಯಲ್ಲಿ ಸಿಎಂ ಹಾಗೂ ಡಿಸಿಎಂ ಗಳ ಕೈವಾಡದ ಬಗ್ಗೆ ಈ ಅಧಿಕಾರಿ ಮಾಹಿತಿ ನೀಡಿದ್ದಾನೆ ಎಂಬ ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ನಾಟಕ ಒಂದನ್ನು ಆರಂಭಿಸಿದೆ. ಕಳಂಕಿತ ಅಧಿಕಾರಿಯಾದ ಕಲ್ಲೇಶ್ ಗೆ ಆಮಿಷ ಒಡ್ಡಿ, ಅಧಿಕಾರ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸರ್ಕಾರವು ED ತನಿಕಾ ಅಧಿಕಾರಿಗಳ ವಿರುದ್ಧ ಸಿಎಂ ಡಿಸಿಎಂ ಹೆಸರನ್ನು ಹೇಳಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಸುಳ್ಳು ಕಂಪ್ಲೇಂಟ್ ಮಾಡಿಸಿದೆ. ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಳ್ಳದೆ, ವಾಲ್ಮೀಕಿ ಹಾಗೂ ಮೂಡಾ ಹಗರಣದ ನೈತಿಕ ಹೊಣೆಯನ್ನು ಹೊತ್ತು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಿಬಿಐ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸುತ್ತೇವೆ ಎಂದಿದ್ದಾರೆ.