ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೃಷಿ ಭೂಮಿ ಭೂಸ್ವಾಧೀನ ತಡೆಗೆ ಸಚಿವ ಎಂ. ಬಿ. ಪಾಟೀಲಗೆ ಮನವಿ

06:36 PM Aug 23, 2024 IST | Samyukta Karnataka

ಬೆಂಗಳೂರು: 500 ಎಕರೆ ಕೃಷಿ ಭೂಮಿಯನ್ನ ಕೆ.ಐ.ಎ.ಡಿ.ಬಿ ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಸ್ತಾವವನ್ನು ಕೈಬಿಡುವಂತೆ ಮನವಿಗೆ ರಾಜ್ಯ ಸಚಿವ ಎಂ. ಬಿ. ಪಾಟೀಲ್‌ ಸ್ಪಂದಿಸಿದ್ದಾರೆ ಎಂದು ಮಾಜಿ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೆಲಮಂಗಲ ತಾಲ್ಲೂಕಿನ ಸೋಂಪುರ, ಹನುಮಂತಪುರ ಹಾಗು ತ್ಯಾಮಗೊಂಡ್ಲು ಹೋಬಳಿಯ ಕೋಡಿಪಾಳ್ಯ ಮತ್ತು ಬಿದಲೂರು ಗ್ರಾಮದ ಸುಮಾರು 500 ಎಕರೆ ಕೃಷಿ ಭೂಮಿಯನ್ನ ಕೆ.ಐ.ಎ.ಡಿ.ಬಿ ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಸ್ತಾವವನ್ನು ಕೈಬಿಡುವಂತೆ ಮನವಿ ಮಾಡಿ ನಾನು ಬರೆದಿದ್ದ ಪತ್ರಕ್ಕೆ ಸನ್ಮಾನ್ಯ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಪ್ರಸ್ತಾವವನ್ನು ಮರುಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಸದರಿ ಜಮೀನುಗಳಲ್ಲಿ ತೆಂಗು, ಅಡಿಕೆ, ಬಾಳೆ ಮುಂತಾದ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಕೃಷಿಯನ್ನೆ ನಂಬಿ ಬದುಕುತ್ತಿರುವ ರೈತರ ಹಿತದೃಷ್ಟಿಯಿಂದ ಈ ಭೂಸ್ವಾದೀನ ಪ್ರಸ್ತಾವವನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು ಎಂದು ರೈತರ ಪರವಾಗಿ ಮಾನ್ಯ ಸಚಿವರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದಿದ್ದಾರೆ

Tags :
#Bjpcongress
Next Article