ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಪಿಸಿಸಿಗೆ ಮೇಜರ್ ಸರ್ಜರಿ: ಯು.ಬಿ. ವೆಂಕಟೇಶ್ ಸೇರಿ ೨೧ ಮುಖ್ಯ ವಕ್ತಾರರ ನೇಮಕ

11:22 PM Apr 17, 2024 IST | Samyukta Karnataka
ಶ್ರೀ ಯು.ಬಿ ವೆಂಕಟೇಶ <br><br>ಅಧ್ಯಕ್ಷರು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಕಾರ್ಯಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಮಾಧ್ಯಮ ಮತ್ತು ಸಂವಹನ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಮೇಲ್ಮನೆ ಸದಸ್ಯರಾದ ಯು.ಬಿ.ವೆಂಕಟೇಶ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಹಿತ ೨೧ ಮುಖಂಡರನ್ನು ಕೆಪಿಸಿಸಿಯ ರಾಜ್ಯ ಮುಖ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ನೂತನ ನೇಮಕಾತಿ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದು, ಡಾ.ಶಂಕರ್ ಗುಹಾ, ಮಾಜಿ ಸಂಸದೆ ತೇಜಸ್ವಿನಿಗೌಡ, ಶಾಸಕರಾದ ಹೆಚ್.ಸಿ.ಬಾಲಕೃಷ್ಣ, ರಿಜ್ವಾನ್ ಅರ್ಷದ್, ಬೇಳೂರು ಗೋಪಾಲಕೃಷ್ಣ, ಕೋನರೆಡ್ಡಿ, ಶಿವಾನಂದ ಕೌಜಲಗಿ, ಪಿ.ಎಂ.ನರೇಂದ್ರಸ್ವಾಮಿ, ಮೇಲ್ಮನೆ ಸದಸ್ಯರಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ೨೧ ಮಂದಿ ನೇಮಕವಾಗಿದ್ದಾರೆ.
ಮಂಜುನಾಥ ಅದ್ದೆ, ಬಿ,ಆರ್.ನಾಯ್ಡು, ಸ್ವಾತಿ ಚಂದ್ರಶೇಖರ್ ಸೇರಿದಂತೆ ೩೬ ಮಂದಿ ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಸಮನ್ವಯಾಧಿಕಾರಿಯಾಗಿ ಜಿ.ಸಿ.ರಾಜುಗೌಡ, ಸಹ ಸಮನ್ವಯಕಾರರಾಗಿ ರವಿಗೌಡ, ಅಬ್ದುಲ್ ಮುನೀರ್, ಇಫ್ರಾನ್ ಹಾಗೂ ಹೆಚ್.ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Next Article