ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

'ಕೈ' ನೆರಳಿನಲ್ಲಿ ತನಿಖೆ

01:40 PM Aug 06, 2024 IST | Samyukta Karnataka

ಬೆಂಗಳೂರು: 'ಕೈ' ನೆರಳಿನಲ್ಲಿ ತನಿಖೆ ನಡೆಸುವ ಕೈಗಳಿಗೆ ಸ್ವತಂತ್ರ್ಯ ಇರುತ್ತದೆ ಎಂದು ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ಕಾರ್ಯವೈಖರಿ ಹಾಗೂ ಅದರ ದಿಕ್ಕು ದೆಸೆಯನ್ನು ಈ ಮೊದಲೇ ಸೂಚಿಸುವಂತಿತ್ತು. ನಿರೀಕ್ಷೆಯಂತೆಯೇ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಶಾಸಕ ದದ್ದಲ್ ಅವರ ಹೆಸರನ್ನು ಕೈಬಿಟ್ಟು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 'ಕೈ' ನೆರಳಿನಲ್ಲಿ ತನಿಖೆ ನಡೆಸುವ ಕೈಗಳಿಗೆ ಸ್ವತಂತ್ರ್ಯ ಇರುತ್ತದೆ ಎಂದು ನಿರೀಕ್ಷಿಸಲು ಹೇಗೆ ಸಾಧ್ಯ? ಸದ್ಯ ಇಡಿ ನಡೆಸುತ್ತಿರುವ ತನಿಕೆಯಿಂದ ಮಾತ್ರ ಈ ಹಗರಣದಲ್ಲಿ ಲೂಟಿ ಭಾಗೀದಾರರಾಗಿರುವ ಲೂಟಿಕೋರರನ್ನು ಶಿಕ್ಷಿಸಲು ಸಾಧ್ಯ ಎನ್ನುವುದು ನಾಡಿನ ಜನರ ನಿರೀಕ್ಷೆಯಾಗಿದೆ ಎಂದಿದ್ದಾರೆ.

Tags :
#Bjp#BJPJDSPadayatre#cmsiddaramaiah#MUDAScam
Next Article