ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ, ಮರ

09:26 PM May 23, 2024 IST | Samyukta Karnataka

ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ಬಿರುಗಾಳಿ ಸಹಿತ ಆರ್ಭಟಿಸಿದ ಮಳೆಯಲ್ಲಿ ವಿದ್ಯುತ್ ಕಂಬ ಸೇರಿದಂತೆ ಮರಗಳು ನೆಲಕ್ಕುರುಳಿದ ಘಟನೆ ನಡೆದಿದೆ.
ತಾಲೂಕಿನ ಮದಲಗಟ್ಟಿ ಗ್ರಾಮದ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕ ಸಮೇತ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹಾಬಲಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿಯ ರಸ್ತೆ ಬದಿಯ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಹನಮಸಾಗರ ಸೀಮಾದಲ್ಲಿ ರೈತ ಮೊಹಮ್ಮದ್ ಸಿರಾಜುದ್ದೀನ್ ಮೂಲಿಮನಿ ಎಂಬುವರಿಗೆ ಸೇರಿದ ತೋಟದಲ್ಲಿನ ಮರಗಳು ಬಿದ್ದಿವೆ. ನರ್ಸರಿ ಪ್ಲಾಟ್ ಗಾಳಿ ಮಳೆಗೆ ಹಾನಿಯಾಗಿದ್ದು, ಹನುಮನಾಳ ಹೋಬಳಿಯಲ್ಲಿ ಮಳೆ ಗಾಳಿಗೆ ಎರಡು ಕುರಿಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.

Next Article