ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುತ್ತಿಗೆ ಕಾರ್ಮಿಕರ ವತಿಯಿಂದ ಸಂಸದ ಚೌಟರಿಗೆ ಮನವಿ

06:19 PM Aug 23, 2024 IST | Samyukta Karnataka

ಸುರತ್ಕಲ್: ಎಂ,ಅರ್,ಪಿ,ಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರ ಹಲವಾರು ಸಮಸ್ಯೆಗಳಿದ್ದು ಅದನ್ನು ಸರಿಪಡಿಸಲು ಮತ್ತು ಗುತ್ತಿಗೆ ಕಾರ್ಮಿಕರ ಮಾಸಿಕ ವೇತನ 21000 ಕ್ಕಿಂತ ಹೆಚ್ಚು ಇದ್ದಲ್ಲಿ ಇ.ಎಸ್.ಐ ( ಅರೋಗ್ಯ ವಿಮೆ ) ಸೌಲಭ್ಯ ಇಲ್ಲ ಅದಕ್ಕೆ ಮಾಸಿಕ ವೇತನ 35000 ರವರೆಗೆ ಅರೋಗ್ಯ ವಿಮೆ ಒದಗಿಸುವಂತೆ ಗುತ್ತಿಗೆ ಕಾರ್ಮಿಕರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ಸಂಸದರು ಗುತ್ತಿಗೆ ಕಾರ್ಮಿಕರ ಕೆಲವೊಂದು ಸಮಸ್ಯೆಗಳನ್ನು ಎಂ,ಅರ್,ಪಿ,ಎಲ್ ಸಂಸ್ಥೆಯ ಉನ್ನತ ಮಟ್ಟದ ಅಧಿಕಾರಿಗಳಲ್ಲಿ ಮಾತನಾಡಿ ಸರಿಪಡಿಸಲಾಗುವುದು ಮತ್ತು ಇ.ಎಸ್.ಐ (ಅರೋಗ್ಯ ವಿಮೆ ) ಸೌಲಭ್ಯ ಇಲ್ಲದಿರುವುದು ಇಡೀ ದೇಶದಲ್ಲಿನ ಕಾರ್ಮಿಕರ ದೊಡ್ಡ ಸಮಸ್ಯೆಯಾಗಿದ್ದು ಅದನ್ನು ಶೀಘ್ರವಾಗಿ ಸಮಸ್ಯೆ ಸರಿಪಡಿಸಲು ಅಸಾಧ್ಯ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸರಿಪಡಿಸಲಾಗುವುದು ಕಾರ್ಮಿಕರ ಸಮಸ್ಯೆಗೆ ಪರ್ಯಾಯ ವ್ಯವಸ್ಥೆಗೆ ಅರೋಗ್ಯ ವಿಮೆ ಬಗ್ಗೆ ಎಂ,ಅರ್,ಪಿ,ಎಲ್ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಕಾರ್ಮಿಕರ ಮುಖಂಡ ಪುಷ್ಷರಾಜ್ ಶೆಟ್ಟಿ ಮಧ್ಯ, ಭಾಸ್ಕರ್, ಸಂತೋಷ್ ಶೆಟ್ಟಿ, ಕರುಣಾಕರ ಮುಂತಾದವರು ಉಪಸ್ಥಿತರಿದ್ದರು

Tags :
#Mangalore#ಮಂಗಳೂರು
Next Article