ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೃಹ ಸಚಿವರ ವಾಹನಕ್ಕೆ ಘೇರಾವ್

09:44 PM May 20, 2024 IST | Samyukta Karnataka

ಹುಬ್ಬಳ್ಳಿ: ಡಿಸಿಪಿ ವರ್ಗಾವಣೆ ರದ್ದು ಕೋರಿ ಗೃಹ ಸಚಿವ ಡಾ. ಜಿ ಪರಮೇಶ್ವರ ವಾಹನಕ್ಕೆ ಘೇರಾವ್ ಹಾಕಿದ ಘಟನೆ ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆಯಿತು.
ಗೃಹ ಸಚಿವರ ಆಗಮನಕ್ಕಾಗಿಯೇ ಕಾದು ಕುಳಿತಿದ್ದ ಆದಿ ಜಾಂಬವ ಸಮುದಾಯದ ಮುಖಂಡರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್‌ನ ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ, ಕೆಲ‌ಕಾಲ ಪ್ರತಿಭಟನೆ ನಡೆಸಿದರು.
ಕೊನೆಗೆ ವಾಹನದಿಂದ ಕೆಳಗಿಳಿದು ಬಂದ ಪರಮೇಶ್ವರ್, ಪ್ರತಿಭಟನಾ ನಿರತರನ್ನು ಸಮಾಧಾನ ಪಡಿಸಿದರು. ಗೃಹ ಸಚಿವರು ನೀಡಿದ ಸಮಜಾಯಿಶಿಯಿಂದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Next Article