ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು

01:16 PM Jan 03, 2024 IST | Samyukta Karnataka

ಬೆಂಗಳೂರು: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿರುವ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು, ನನಗೆ ಈ ಬಗ್ಗೆ ಮಾಹಿತಿ ಸಿಗುತ್ತಿದೆ ಎಂದು ಹೇಳಿದ್ದಾರೆ. ಈ ಹಿಂದೆ ಕರಸೇವಕರು ಅಯೋಧ್ಯೆಯಿಂದ ಹಿಂತಿರುಗುವಾಗ ಗೋದ್ರಾ ದುರಂತ ನಡೆದಿತ್ತು. ಈ ಬಾರಿ ಅಯೋಧ್ಯೆಗೆ ತೆರಳುವ ಭಕ್ತರಿಗೆ ಸರ್ಕಾರ ರಕ್ಷಣೆ ನೀಡಬೇಕು. ಈ ಬಗ್ಗೆ ಮಾಹಿತಿ ಸಿಕ್ಕಿಯೇ ನಾನು ಹೇಳುತ್ತಿದ್ದೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

Next Article