ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗ್ಯಾರಂಟಿ ಫೇಲ್‌ ಆಗಿದೆ

02:15 PM Dec 23, 2023 IST | Samyukta Karnataka

ಬೆಂಗಳೂರು: ಗ್ಯಾರಂಟಿ ಫೇಲ್‌ ಆಗಿದೆ, ಅಭಿವೃದ್ಧಿ ನಿಂತುಹೋಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್‌. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಹಿಬಾಬ್‌ ನಿಷೇಧ ಆದೇಶ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಗ್ಯಾರಂಟಿ ಫೇಲ್‌ ಆಗಿದೆ, ಅಭಿವೃದ್ಧಿ ನಿಂತುಹೋಗಿದೆ, ಬರಗಾಲದಿಂದ ಕಂಗೆಟ್ಟಿರುವ ರೈತರ ಕಣ್ಣೀರೊರೆಸಲು ಕಲ್ಪಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇವೆಲ್ಲ ಸಂಗತಿಗಳನ್ನು ಮುಚ್ಚಿಹಾಕಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್‌ ಮೊರೆ ಹೋಗಿರುವುದು ವಿಪರ್ಯಾಸದ ಸಂಗತಿ. ಓಲೈಕೆಯ ನೆಪದಲ್ಲಿ ಶಾಲಾ-ಕಾಲೇಜುಗಳಲ್ಲಿದ್ದ ಸಮವಸ್ತ್ರ ಪದ್ದತಿಯ ಮಹತ್ವವನ್ನು ಕುಗ್ಗಿಸಿ, ಒಡೆದು ಆಳುವ ನೀತಿಯನ್ನು ಅನುಸರಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡನೀಯ ಎಂದು ಬರೆದುಕೊಂಡಿದ್ದಾರೆ.

Next Article