ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ರಸ್ತೆ ಮಧ್ಯೆ ಹೊತ್ತಿ ಉರಿದ ಓಮ್ನಿ

11:58 AM Aug 26, 2024 IST | Samyukta Karnataka

ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆ ಓಮ್ನಿ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ.

ಶೃಂಗೇರಿ ತಾಲೂಕಿನ ಬೇಗಾರು ಗ್ರಾಮದಿಂದ ಓಮ್ನಿ ಶೃಂಗೇರಿ ಪಟ್ಟಣಕ್ಕೆ ಬರುತ್ತಿತ್ತು. ಕಾರಿನಲ್ಲಿ ಚಾಲಸ ಸೇರಿ ಇಬ್ಬರು ಪ್ರಯಾಣಿಸುತ್ತಿದ್ದರು.

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಕಾರಿನಲ್ಲಿದ್ದವರು ಕೆಳಗಿಳಿದು ಬೆಂಕಿ ಎಲ್ಲಿಂದ ಬರುತ್ತಿದೆ ಎಂದು ನೋಡಿ ಬೆಂಕಿಯನ್ನ ಆರಿಸಲು ನೋಡಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.

ಮಲೆನಾಡಲ್ಲಿ ಮಳೆ ಇದ್ದದಿದ್ದರೂ ಬೀಸ್ತಿರೋ ಗಾಳಿಗೆ ಬೆಂಕಿಯ ಜ್ವಾಲೆ ಹೆಚ್ಚಾಗುತ್ತಲೇ ಇತ್ತು. ಹಾಗಾಗಿ, ಕಾರಿನಲ್ಲಿದ್ದ ಇಬ್ಬರು ಬೆಂಕಿಯ ಜ್ವಾಲೆ ಹೆಚ್ಚಾದ ಹಿನ್ನೆಲೆ ಆರಿಸುವ ವಿಫಲ ಪ್ರಯತ್ನ ನಡೆಸಿ ದೂರ ಹೋಗಿದ್ದಾರೆ.

ಕ್ಷಣಕ್ಷಣಕ್ಕೂ ಹೆಚ್ಚಿದ ಬೆಂಕಿಯ ಜ್ವಾಲೆಯಿಂದ ಕಾರು ನೋಡ-ನೋಡ್ತಿದ್ದಂತೆ ರಸ್ತೆ ಮಧ್ಯೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

Next Article