For the best experience, open
https://m.samyuktakarnataka.in
on your mobile browser.

ಸಂವಿಧಾನ ಕೊಟ್ಟ ಅಧಿಕಾರ ಮರೆಯಬೇಡಿ

01:11 PM Apr 26, 2024 IST | Samyukta Karnataka
ಸಂವಿಧಾನ ಕೊಟ್ಟ ಅಧಿಕಾರ ಮರೆಯಬೇಡಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಸಾಗುತ್ತಿದ್ದು, ಸ್ವಾಮೀಜಿಗಳು ಹಾಗೂ ಗಣ್ಯರು ತಮ್ಮ ಹಕ್ಕು ಚಲಾಯಿಸಿದರು.
ಬಾಳೆಹೊನ್ನೂರು ರಂಭಾಪುರಿ ಶ್ರೀ ರಂಭಾಪುರಿ ಮಠದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು, ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದನ್ನು ಮರೆಯಬೇಡಿ, ಸಧೃಡ ಭಾರತ ನಿರ್ಮಾಣಕ್ಕಾಗಿ ಮತದಾನ ಮಾಡಿ ಎಂದು ಮನವಿ ಮಾಡಿದರು.
ಕೊಪ್ಪ ತಾಲೂಕು ಹರಿಹರಪುರ ಶ್ರೀಮಠದ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹರಿಹರಪುರ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ವಿನಂತಿಸಿದರು.
ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ಚಿಕ್ಕಕುರುಬರಹಳ್ಳಿ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆ ಸಂಖ್ಯೆ 138 ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.