ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿತ್ತಾ ಮಳೆಗೆ ನಾಲ್ಕು ಮನೆ ಕುಸಿತ

03:25 PM Oct 12, 2024 IST | Samyukta Karnataka

ಇಳಕಲ್ : ನಗರದಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಶನಿವಾರ ಬೆಳಿಗ್ಗೆ ಸುರಿದ ಚಿತ್ತಾ ಮಳೆಯಿಂದಾಗಿ ನಾಲ್ಕು ಮನೆಗಳು ಬಿದ್ದಿವೆ ಎಂದು ತಹಸೀಲ್ದಾರ ಇಲಾಖೆಯ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರದಂದು ಬೆಳಿಗ್ಗೆ ನಾಲ್ಕು ಗಂಟೆಗೆ ಸುರಿಯಲು ಆರಂಭವಾಗಿ ಮುಂಜಾನೆ ಏಳು ಗಂಟೆಯವರೆಗೆ ದೊಡ್ಡ ಪ್ರಮಾಣದಲ್ಲಿ ಸುರಿಯಿತು. ಈ ಮಳೆ ಗ್ರಾಮೀಣ ಪ್ರದೇಶಗಳಲ್ಲಿ ಜೋರಾಗಿ ಸುರಿದಿದ್ದು ನಾಲ್ಕು ಮನೆಗಳು ಬೇರೆಬೇರೆ ಗ್ರಾಮಗಳಲ್ಲಿ ಒಂದೊಂದು ಮನೆ ಬಿದ್ದಿವೆ.
ತಾಲೂಕಿನ ಜಂಬಲದಿನ್ನಿ, ಚಿನ್ನಾಪುರ ಎಸ್ ಕೆ ಮತ್ತು ಸೋಮಲಾಪುರ, ನಿಡಸನೂರ ಗ್ರಾಮದಲ್ಲಿ ತಲಾ ಒಂದು ಮನೆ ಬಿದ್ದಿವೆ ಎಂದು ತಹಸೀಲ್ದಾರ ಕಾರ್ಯಾಲಯದ ಪ್ರಕಾಶ ವಜ್ಜಲ ಹೇಳಿದರು

Tags :
#ಅವಾಂತರ#ಇಳಕಲ್#ಬಾಗಲಕೋಟೆ#ಮಳೆ
Next Article