ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿತ್ರದುರ್ಗದಲ್ಲಿಯೇ ರಾಜಕಾರಣ: ಕೋಲಾರಕ್ಕೆ ಹೋಗಲ್ಲ

07:49 PM Nov 04, 2023 IST | Samyukta Karnataka

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಮುಖ ನೋಡದೆ ಸಂಸತ್‌ಗೆ ಕಳುಹಿಸುವ ಚಿತ್ರದುರ್ಗ ಜಿಲ್ಲೆಯಲ್ಲಿಯೇ ರಾಜಕಾರಣ ಮಾಡುತ್ತೆನೆ ಹೊರತು ಕೋಲಾರಕ್ಕೆ ಹೋಗುವುದಿಲ್ಲ ಎಂದು ಸಚಿವ ಎ.ನಾರಾಯಣಸ್ವಾಮಿ ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ೨೦೧೮ರ ಚುನಾವಣೆಯಲ್ಲಿ ಮುಖ ನೋಡದೆ ನನ್ನನ್ನು ಸಂಸತ್‌ಗೆ ಕಳುಹಿಸಿದ ಜನರ ಪರವಾಗಿ ಕೆಲಸ ಮಾಡುತ್ತೆನೆ. ಚಿತ್ರೆದುರ್ಗ ಬಿಟ್ಟು ಬೇರೆ ಕಡೆ ರಾಜಕಾರಣ ಮಾಡುವುದಿಲ್ಲ. ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಬೇಕು. ಕೋಲಾರಕ್ಕೆ ಹೋಗಲ್ಲ ಎಂದರು.
ಸ್ಥಳೀಯರಿಗೆ ಟಿಕೆಟ್ ಕೊಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ನನ್ನ ವಿರೋಧ ಇಲ್ಲ. ಮತದಾರರ ಪ್ರಜ್ಞಾವಂತಿಕೆ ಸಲಾಂ. ಸ್ಥಳೀಯರಿಗೆ ಟಿಕೆಟ್ ಕೊಡಬೇಕೆ ಎನ್ನುವ ಕೂಗಿಗೆ ಬೆಂಬಲ ಇದೆ. ಕುತಂತ್ರ ಮಾಡುವ ನಾರಾಯಣಸ್ವಾಮಿ ಅಲ್ಲ.ಚುನವಣೆಗೆ ಜನರ ಸೇವೆ ಮಾಡುವರು ಸ್ಪರ್ಧಿಸಬೇಕು. ಚುನಾವಣೆ ಎಂದರೆ ವ್ಯವಹಾರಕ್ಕೆ ಬಳಕೆ ಮಾಡಿ ಹಣ ಮಾಡುವುದಕ್ಕೆ ಎನ್ನುವ ದಾರಿಯಲ್ಲಿ ಸಾಗುತ್ತಿದೆ. ಮತ ಹಾಕಿದ ಮೇಲೆ ಚುನಾಯಿತ ಪ್ರತಿನಿಧಿಗಳು ರಾಜರಾಗಿ ಮತದಾರರು ಭಿಕ್ಷೆ ಬೇಡಬೇಕೆ? ನಿಮಗೆ ಮತ ಹಾಕಿದ್ದೆವೆ. ನೀವೆ ಕೆಲಸ ಮಾಡಿಕೊಡಬೇಕು ಎನ್ನುವ ಪರಿಸ್ಥಿತಿ ಇದೆ. ರಾಜಕಾರಣಿಗಳು ಎಲ್ಲವನ್ನು ಲಾಭದಾಯಕವಾಗಿ ನೋಡುತ್ತಿದ್ದಾರೆ. ಇದು ಅನುಭವವಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.

Next Article