For the best experience, open
https://m.samyuktakarnataka.in
on your mobile browser.

ಚುನಾವಣಾ ಸಿಬ್ಬಂದಿಗಳಿಗೆ ಹೋಳಿಗೆ ಊಟ!

12:05 PM May 07, 2024 IST | Samyukta Karnataka
ಚುನಾವಣಾ ಸಿಬ್ಬಂದಿಗಳಿಗೆ ಹೋಳಿಗೆ ಊಟ

ಸಿಬ್ಬಂದಿಗಳಿಗೆ ವಿಶೇಷ ಕಾಳಜಿ ವಹಿಸಿದ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತಗಟ್ಟೆ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಧ್ಯಾಹ್ನದ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1693 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದು, ಅವರೆಲ್ಲರಿಗೂ ಮಧ್ಯಾಹ್ನದ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಮತಗಟ್ಟೆ ಸಿಬ್ಬಂದಿಗಳು ಉತ್ಸಾಹದೊಂದಿಗೆ ಚುನಾವಣೆಯ ಕರ್ತವ್ಯದಲ್ಲಿ ತೊಡಗಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀ ಬಕ್ಕೇಶ್ವರ ಪ್ರೌಡಶಾಲೆಯ ಮತಗಟ್ಟೆ ಸಂಖ್ಯೆ 75 ರಲ್ಲಿ ಮತ ಚಲಾಯಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರ ಮತದಾನ ಪ್ರಮಾಣ 11 ಗಂಟೆಗೆ

ಜಗಳೂರು

24.40

ಹರಿಹರ

26.94

ದಾವಣಗೆರೆ ಉತ್ತರ

25.45

ದಾವಣಗೆರೆ ದಕ್ಷಿಣ

21.03

ಮಾಯಕೊಂಡ

25.99

ಚನಗಿರಿ

22.94

ಹೊನ್ನಾಳಿ

22.01

ಹರಪನಹಳ್ಳಿ

21.59

23.79%