For the best experience, open
https://m.samyuktakarnataka.in
on your mobile browser.

ಚುನಾವಣೆ ಬಗ್ಗೆ ಅಮಿತ್‌ ಶಾ ಚರ್ಚೆ

07:40 PM Feb 11, 2024 IST | Samyukta Karnataka
ಚುನಾವಣೆ ಬಗ್ಗೆ ಅಮಿತ್‌ ಶಾ ಚರ್ಚೆ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮೈಸೂರು ಪ್ರವಾಸ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಸಭೆಯಲ್ಲಿ ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಮಾತ್ರ ಚರ್ಚೆಯಾಗಿದೆ. ಸೀಟ್ ಹಂಚಿಕೆ ಬಗ್ಗೆ ಹೈಕಮಾಂಡ್​ ತೀರ್ಮಾನಿಸಲಿದೆ ಎಂದರು. ಇನ್ನು ಕಾಂಗ್ರೆಸ್‌ನ ದುರುದ್ದೇಶದ ಪ್ರತಿಭಟನೆ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ಅಮಿತ್ ಶಾ ಸಲಹೆ ನೀಡಿರುವುದಾಗಿ ತಿಳಿಸಿದರು.