ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜನರಿಗೆ ಸ್ಪಷ್ಟವಾದ ಬೆದರಿಕೆ ಒಡ್ಡಿದ್ದಾರೆ

01:08 PM Feb 01, 2024 IST | Samyukta Karnataka

ಬೆಂಗಳೂರು: ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ. ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ. ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಸರಕಾರವು, ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದೇ ಭಾವಿಸಬೇಕಾಗುತ್ತದೆ. ಅದು ನಿಜವೂ ಹೌದು ಎನ್ನುವುದು ನನ್ನ ಭಾವನೆ. ಆ ಶಾಸಕರ ಹೇಳಿಕೆಯ ಧಾಟಿ ಹೇಗಿದೆ ಎಂದರೆ, ಅವರು ಜನರಿಗೆ ಸ್ಪಷ್ಟವಾದ ಬೆದರಿಕೆ ಒಡ್ಡಿದ್ದಿದ್ದಾರೆ. "ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ.. ಇಲ್ಲವಾದರೆ ನಿಮಗೆ ಕೊಟ್ಟಿರುವ ಗ್ಯಾರಂಟಿಗಳನ್ನು ಮುಲಾಜಿಲ್ಲದೆ ರದ್ದು ಮಾಡುತ್ತೇವೆ" ಎಂದು ಅವರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ, ಜನರ ನಂಬಿಕೆಗೆ ಎಸಗಿದ ಅಪಚಾರ, ಆ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ. ಆಮೇಲೆ ಅವುಗಳನ್ನು ಜಾರಿ ಮಾಡಿದ್ದೀರಿ. ಗ್ಯಾರಂಟಿ ಕೊಡಿ, ನಿಮಗೆ ವೋಟು ಹಾಕುತ್ತೇವೆ ಎಂದು ಜನರೇನು ಕೇಳಿರಲಿಲ್ಲ, ವಾಸ್ತವ ಸ್ಥಿತಿ ಹೀಗಿದ್ದ ಮೇಲೆ ಈಗ ಗ್ಯಾರಂಟಿಗಳನ್ನು ಅದ್ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಸರಕಾರದ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ" ಎಂದು ಬರೆದುಕೊಂಡಿದ್ದಾರೆ.

Next Article