ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ ತುಕಾರಂ

12:15 PM Oct 24, 2024 IST | Samyukta Karnataka

ಬಳ್ಳಾರಿ: ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ. ‌ಆರೋಪ ಪ್ರತ್ಯಾರೋಪ ಮಾಡಿ ಸಮಯ ಕಳೆಯುತ್ತಿದ್ದಾರೆ ಎಂದು ಸಂಸದ ಇ.ತುಕಾರಾಂ ಹೇಳಿದರು.
ಸಂಡೂರಿನಲ್ಲಿ ಪತ್ನಿ ಜತೆ ನಾಮ ಪತ್ರ ಸಲ್ಲಿಕೆಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದರು. ಬಳ್ಳಾರಿಯಲ್ಲಿ ಹುಲಿ ಸಿಂಹಗಳನ್ನೆಲ್ಲಾ ನೋಡಿದ್ದೇವೆ. ನಾವು ರಾಜರು, ಸಂಡೂರಿನ ಪ್ರತಿಯೊಬ್ಬರೂ ರಾಜರು. ಘೋರ್ಪಡೆ ಹಾಗೂ ಲಾಡ್ ಕುಟುಂಬಸ್ಥರು ಸಂಡೂರನ್ನ ದಶಕಗಳ ಕಾಲ ಆಳಿದ್ದಾರೆ. ಆ ಬಳಿಕ ಮೀಸಲಾತಿ ಬದಲಾದ ಮೇಲೆ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಜನ ನಮ್ಮ ಜೊತೆಗಿದ್ದಾರೆ ಎನ್ನುತ್ತಲೇ ತುಕಾರಂ ಜನಾರ್ಧನರೆಡ್ಡಿಗೆ ಟಾಂಗ್ ಕೊಟ್ಟರು. ಸಂಡೂರು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮಾತನಾಡಿ, ಜನರಿಂದ ಉತ್ತಮ ರೆಸ್ಪಾನ್ಸ್ ಬರ್ತಿದೆ. 2008 ರಿಂದಲೂ ಜನಾರ್ಧನರೆಡ್ಡಿ ಅವರನ್ನ ಎದುರಿಸುತ್ತಾ ಬಂದಿದ್ದೇವೆ. ನಮಗೇನು ಹೊಸದಲ್ಲ, ನಾವುಗೆದ್ದೇ ಗೆಲ್ತೇವೆ. ಜನರ ಆಶೀರ್ವಾದ ನಮ್ಮ ಜೊತೆಗಿದೆ. ನಮ್ಮ ಪಕ್ಷದಲ್ಲಿ ಮಹಿಳೆಯರಿಗೂ ಸಮಾನ ಸ್ಥಾನಮಾನ ಕೊಟ್ಟಿದ್ದಾರೆ. ಅದಕ್ಕೆ ನಾನೇ ಸ್ಪಷ್ಟ ಉದಾಹರಣೆ ಎಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಹೇಳಿದರು.

Tags :
#ಉಪಚುನಾವಣೆ#ಕಾಂಗ್ರೆಸ್‌#ತುಕಾರಾಂ#ಬಳ್ಳಾರಿ
Next Article