ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು

01:24 PM Mar 12, 2024 IST | Samyukta Karnataka

ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ.

ಕಲಬುರಗಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ. ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ' ಪ್ರಿಯಾಂಕ್ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ' ಎಂದು ಜಾಧವ ಹೇಳಿದ್ದಾರೆ, ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದರು ಯಾರು ? ಎಂದು ತಿರುಗೇಟು ನೀಡಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಪುನರುಚ್ಚರಿಸಿದ ಸಚಿವರು, ಗುಜರಾತ್ ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್‌ಗಳಾಗಿವೆ ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು ಅದನ್ನು ಕಾನೂನು ಸುವ್ಯವಸ್ಥೆ‌ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ ಎಂದು ಮಾರುತ್ತರ ನೀಡಿದರು.

ಅಪರಂಜಿ ಎಲ್ಲಿ ?: ಚಿತ್ತಾಪುರದ ಅಪರಂಜಿ ಈಗ ಎಲ್ಲಿ ? ಎಂದು ಜಾಧವ್‌ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್ ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.

ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್,ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್ ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.

ಪ್ರೊಟೋಕಾಲ್ ಮರೆತವರು: ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ ಎಂದರು.

ಬಿಜೆಪಿಗರ ಟಿಕೇಟ್ ನಿರಾಕರಣೆ ನನಗೆ ಸಂಬಂಧಿಸಿಲ್ಲ: ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ ಎಂದರು. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.

ಬಾಡಿಗೆ ಭಾಷಣಕಾರ: ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮಪಂಚಾಯತ ಚುನಾವಣೆ ಗೆದ್ದಿಲ್ಲ ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದರು.

ನಾನೇ ಮನೆ ದೇವರು : ಆರ್ ಅಶೋಕ್ ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ ಎಂದರು. ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅವರಿಗೆ ತಲೆ ಕೆಟ್ಟಿದೆ, ಮಾನಸಿಕ‌ ಸಮತೋಲನ ಕಳೆದುಕೊಂಡಿದ್ದಾರೆ ಎಂದರು.

Next Article