ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೀವ ಬೆದರಿಕೆ ಇಬ್ಬರ ಸೆರೆ

06:08 PM Oct 09, 2024 IST | Samyukta Karnataka

ಮಂಗಳೂರು: ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(೪೦), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(೩೧) ದಸ್ತಗಿರಿ ಮಾಡಿದ ಆರೋಪಿಗಳು.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ಅ. ೫ರಂದು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: ೩೫೨, ೧೧೫(೨), ೩೫೧(೨), ೧೦೯ ಜೊತೆಗೆ ೩(೫) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಆರೋಪಿ ಮೊಹಮ್ಮದ್ ಅತಾವುಲ್ಲಾ ಎಂಬಾತನನ್ನು ಅ. ೭ರಂದು, ಆರೋಪಿ ತೌಸೀರ್ ಎಂಬಾತನನ್ನು ಅ. ೮ರಂದು ದಸ್ತಗಿರಿ ಮಾಡಲಾಯಿತು.
ದಸ್ತಗಿರಿ ಮಾಡಲಾದ ಆರೋಪಿತರ ಪೈಕಿ ಮಹಮದ್ ಅತಾವುಲ್ಲಾ ಎಂಬಾತನು ಘಟನಾ ಸಮಯದಲ್ಲಿ ದೂರುದಾರರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದು ಹಾಗೂ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ ಪ್ರಮುಖ ಆರೋಪಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್‌ನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

Next Article