For the best experience, open
https://m.samyuktakarnataka.in
on your mobile browser.

ಜೆರೋಸಾ ಶಾಲೆ ಪ್ರಕರಣ: ಶಾಸಕರಿಗೆ ನಿರೀಕ್ಷಣಾ ಜಾಮೀನು

01:01 PM Feb 20, 2024 IST | Samyukta Karnataka
ಜೆರೋಸಾ ಶಾಲೆ ಪ್ರಕರಣ  ಶಾಸಕರಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆ ಮುಂಭಾಗ ಪ್ರತಿಭಟನೆ ಪ್ರಕರಣ ಶಾಸಕ ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ ಹಾಗೂ ಇತರರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣ ಜಾಮೀನು ಮಂಜೂರು ಜೆರಾಲ್ಡ್‌ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.
ಶಾಸಕರು ಅಲ್ಲದೆ ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಕಾರ್ಪೊರೇಟರ್‌ಗಳಾದ ಸಂದೀಪ್‌ ಹಾಗೂ ಭರತ್‌ ಕುಮಾರ್‌ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರಿಗೂ ನಿರೀಕ್ಷಣ ಜಾಮೀನು ಮಂಜೂರಾಗಿದೆ.