ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ಮಾಡಿದ ಮತಾಂಧರು

11:30 AM Apr 24, 2024 IST | Samyukta Karnataka
ಸಾಂದರ್ಭಿಕ ಚಿತ್ರ

ಬೆಂಗಳೂರು: ಜೈ ಶ್ರೀರಾಮ್ ಎನ್ನುವಂತಿಲ್ಲ ಅನ್ನುವಂತಹ ದುಸ್ಥಿತಿಗೆ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ದೂಡಿದೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಹನುಮ ಜನ್ಮಸ್ಥಳದಲ್ಲಿ ಹನುಮ ಜಯಂತಿಯ ದಿನವಾದರೂ ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಅಂತಹ ದುಸ್ಥಿತಿಗೆ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ದೂಡಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ಹಿಂದೂ ಯುವಕ ಕುಮಾರ್ ರಾಠೋಡ್ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ 20 ಮುಸ್ಲಿಂ ಯುವಕರು ಸೇರಿಕೊಂಡು ಹಿಗ್ಗಾಮುಗ್ಗ ಥಳಿಸಿದ್ದಾರೆ.
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ಮಾಡಿದ ಮತಾಂಧರು, ಬಳಿಕ ಜಾತಿ ಹೆಸರಿಡಿದು ನಿಂದಿಸಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯ ಸಾಬ್, ಕರ್ನಾಟಕವನ್ನು ಇಸ್ಲಾಮಿಕ್ ಸ್ಟೇಟ್ ಮಾಡುವ ಹುನ್ನಾರವನ್ನೇನಾದರೂ ಹಾಕಿಕೊಂಡಿದ್ದೀರೋ? ಎಂದು ಪ್ರಶ್ನಿಸಿದೆ.

Next Article