ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ

09:02 PM Sep 22, 2024 IST | Samyukta Karnataka

ಹೊಸಪೇಟೆ: ತಿರುಪತಿ ಲಡ್ಡು ವಿಷಯದಲ್ಲಿ ಆರೋಪ ಬಂದ ನಂತರ ಮತ್ತೆ ನಂದಿನ ತುಪ್ಪ ಕಳಿಸುವಂತೆ ಟಿಟಿಡಿಯಿಂದ ಬೇಡಿಕೆ ಬಂದಿದ್ದು, ಕಳೆದ ೧೫ ದಿನಗಳಿಂದ ನಂದಿನ ತುಪ್ಪು ರಫ್ತು ಆಗುತ್ತಿದೆ ಎಂದು ಕೆ.ಎಂ.ಎಫ್.ಅಧ್ಯಕ್ಷ ಭೀಮಾನಾಯ್ಕ್ ಹೇಳಿದರು.
ಟಿ.ಬಿ.ಡ್ಯಾಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ೨೦೨೦ ರಿಂದ ೨೦೨೪ ಪ್ರಾರಂಭದವರಗೆ ನಂದಿನಿ ಬ್ರಾಂಡ್‌ನ ಯಾವುದೇ ಉತ್ಪನ ತಿರುಪತಿಗೆ ಕಳಿಸಲಾಗಿಲ್ಲ. ಮತ್ತೆ ಇದೀಗ ಟಿಟಿಡಿಯಿಂದ ಬೇಡಿಕೆ ಬಂದಿದೆ. ನಮ್ಮಲ್ಲಿ ಸಾಕಷ್ಟು ಪ್ರಮಾಣದಲ್ಲಿ ತುಪ್ಪ ಸೇರಿದಂತೆ ಎಲ್ಲಾ ಪ್ರಾಡಕ್ಟ್ ಹೆಚ್ಚು ಪ್ರಮಾಣದಲ್ಲಿ ಸ್ಟಾಕ್ ಇದೆ ಎಂದರು. ದೇಶದಲ್ಲಿ ನಂದಿನಿ ಬ್ರಾಂಡ್‌ನ ವಿಸ್ವಾಸಕ್ಕೆ ಸಮಸ್ತ ಕನ್ನಡಿಗರು ಹೆಮ್ಮೆ ಪಡುವಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ತುಪ್ಪ ತುಂಬಿದ ಟ್ಯಾಂಕರ್ ವಿಷಯದಲ್ಲಿ ಅನಾನುಕೂಲವಾಗದಂತೆ ಜಿಪಿಎಸ್ ಅಳವಡಿಕೆ ಮಾಡಲಾಗಿದೆ. ಟ್ಯಾಂಕರ್ ವಿಷಯದಲ್ಲಿ ಯಾವುದೇ ರೀತಿಯ ಕಲಬೆರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ ಎಂದರು.

Tags :
gheeKMFnandinitirupati ladduTTD
Next Article