ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟೀಕೆಯ ಟ್ವೀಟ್‌ಗಳಿಗೆ ಅಭಿವೃದ್ಧಿಯ ಉತ್ತರ .

07:11 PM Aug 23, 2024 IST | Samyukta Karnataka

ಬೆಂಗಳೂರು: ಸಾರಿಗೆ ಸಂಸ್ಥೆಗಳನ್ನು ದಿವಾಳಿ ಮಾಡಿ ಹೊರಟ್ಟಿದ್ದ ಬಿ.ಜೆ.ಪಿಯ ಅಂದಿನ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿರವರ ಅವಧಿಯಲ್ಲಿನ ಕರ್ಮಕಾಂಡಗಳನ್ನು ಪಟ್ಟಿ ಮಾಡಿ ಮತ್ತೊಮೆ ಮಗದೊಮ್ಮೆ ತಿಳಿಸಿ ಹೇಳಿ ಎಂದು ಟ್ಟೀಟ್ ಮೇಲೆ ಟ್ಟೀಟ್ ಮಾಡಿ ಕೋರುತ್ತಿರುವ ಬಿ.ಜೆ.ಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಗಮನಕ್ಕೆ ಎಂದು ಸಾಲು ಸಾಲು ಹಗರಣಗಳ ಪಟ್ಟಿಯನ್ನ ಸಾಮಾಜಿಕ ಜಾಲತಾಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸರಣಿ ಪೋಸ್ಟ್‌ ಮಾಡಿದ್ದಾರೆ.

ಸಂಸ್ಥೆಗಳನ್ನು ಅಧೋಗತಿ ತಳ್ಳಿದ ಮೇಲೂ ಬಿ.ಜೆ.ಪಿ ಅವರು ರಾಜಕೀಯ ಮಾಡಲು ಬಯಸುತ್ತಾರೆ ಎಂದರೆ ಎಂತಹ ವಿಕೃತ ಮನಸ್ಥಿತಿ ಇವರದ್ದಾಗಿದೆ. ಇವರ ರಾಜಕೀಯಕ್ಕೆ ಸಂಸ್ಥೆಗಳು ಮುಚ್ಚಬೇಕು ಎಂಬ ಮಹದಾಸೆ ಇರಬೇಕು ಅನ್ನಿಸುತ್ತದೆ ಖಾಸಗೀಕರಣ ಇವರ ರಕ್ತದಲ್ಲಿಯೇ ಇದೆ. ಆದರೆ ನಾವು ಸಾರಿಗೆ ಸಂಸ್ಥೆಗಳನ್ನು ಉಳಿಸುವ ಕೆಲಸ ಮಾಡಿಯೇ ಮಾಡುತ್ತೇವೆ.
ಇವರ ಟ್ವೀಟ್‌ಗಳಿಗೆ ನಮ್ಮ ಉತ್ತರ ಅಭಿವೃದ್ಧಿ ಎಂದಿದ್ದಾರೆ.

Tags :
#Bjp#KSRTCcongress
Next Article