For the best experience, open
https://m.samyuktakarnataka.in
on your mobile browser.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

02:05 PM Sep 21, 2024 IST | Samyukta Karnataka
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಹುಬ್ಬಳ್ಳಿ: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಕೊಬ್ಬು ಇತ್ಯಾದಿ ವಸ್ತುಗಳು ಪತ್ತೆಯಾಗಿರುವ ಕುರಿತಂತೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ಈ ತರಹದ ವಸ್ತುಗಳನ್ನು ಲಡ್ಡು ತಯಾರಿಕೆಗೆ ಬಳಸಲಾಗುತ್ತಿದೆ. ಹಿಂದಿನ ಆಂಧ್ರ ಪ್ರದೇಶದ ಸರ್ಕಾರ ಹಾಗೂ ಕಾಂಗ್ರೆಸ್‌ನವರ ಹಿಂದು ವಿರೊಧಿ ನೀತಿಯಿಂದ ಈ ರೀತಿಯಾಗುತ್ತಿದೆ ಎಂದರು. ಪ್ರಸಾದ ವಿತರಣೆಯಲ್ಲಿ ಆಯಾ ಸರ್ಕಾರಗಳು ಮೂಗು ತೂರಿಸದೇ ದೇವಸ್ಥಾನದ ಆಡಳಿತ ಮಂಡಳಿಯವರು ಅದರ ಕುರಿತು ನಿರ್ಧಾರ ಮಾಡಿ ಪರಿಶೀಲಿಸಬೇಕು. ದೇಶದ ನಂಬಿಕೆ, ಸಂಸ್ಕೃತಿ, ಶ್ರದ್ಧೆಯನ್ನು ಹಾಳು ಮಾಡಬಾರದು ಎಂದು ಹೇಳಿದರು.

Tags :