For the best experience, open
https://m.samyuktakarnataka.in
on your mobile browser.

ಅಂಜಲಿ ಕುಟುಂಬಕ್ಕೆ ಸಂತೋಷ್‌ ಲಾಡ್‌ ಭೇಟಿ‌

11:22 AM May 18, 2024 IST | Samyukta Karnataka
ಅಂಜಲಿ ಕುಟುಂಬಕ್ಕೆ ಸಂತೋಷ್‌ ಲಾಡ್‌ ಭೇಟಿ‌
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹತ್ಯೆಯಾದ ಅಂಜಲಿ ಅಂಬಿಗೇರ ಅವರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ನಿವಾಸಕ್ಕೆ ಭೇಟಿ‌ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹತ್ಯೆಯಾದ ಅಂಜಲಿ ಅಂಬಿಗೇರ ಅವರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ನಿವಾಸಕ್ಕೆ ಭೇಟಿ ‌ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಹತ್ಯೆಯಾದ ಅಂಜಲಿ ಕುಟುಂಬಕ್ಕೆ ಸಚಿವ ಸಂತೋಷ್ ಲಾಡ್ ನೆರವು ನೀಡಿದ್ದು, ಎರಡು ಲಕ್ಷ ರೂಪಾಯಿ ಚೆಕ್ ನೀಡಿದರು. ಸಂತೋಷ್ ಲಾಡ್ ಪೌಂಡೇಶನ್‌ನಿಂದ ನೆರವು ನೀಡಿ, ಅಂಜಲಿ ಅಜ್ಜಿ ಗಂಗಮ್ಮ, ತಂಗಿಯರಿಗೆ ಚೆಕ್ ವಿತರಣೆ ಮಾಡಿದರು.