ಅಂಜಲಿ ಕುಟುಂಬಕ್ಕೆ ಸಂತೋಷ್ ಲಾಡ್ ಭೇಟಿ
11:22 AM May 18, 2024 IST | Samyukta Karnataka
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹತ್ಯೆಯಾದ ಅಂಜಲಿ ಅಂಬಿಗೇರ ಅವರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹತ್ಯೆಯಾದ ಅಂಜಲಿ ಅಂಬಿಗೇರ ಅವರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಹತ್ಯೆಯಾದ ಅಂಜಲಿ ಕುಟುಂಬಕ್ಕೆ ಸಚಿವ ಸಂತೋಷ್ ಲಾಡ್ ನೆರವು ನೀಡಿದ್ದು, ಎರಡು ಲಕ್ಷ ರೂಪಾಯಿ ಚೆಕ್ ನೀಡಿದರು. ಸಂತೋಷ್ ಲಾಡ್ ಪೌಂಡೇಶನ್ನಿಂದ ನೆರವು ನೀಡಿ, ಅಂಜಲಿ ಅಜ್ಜಿ ಗಂಗಮ್ಮ, ತಂಗಿಯರಿಗೆ ಚೆಕ್ ವಿತರಣೆ ಮಾಡಿದರು.