ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಲಮಟ್ಟಿಗೆ ಒಳಹರಿವು ಆರಂಭ

08:05 PM Jun 07, 2024 IST | Samyukta Karnataka

ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ಶುಕ್ರವಾರ ದಾಖಲಾಗಿದೆ. ೧,೭೬೮ ಕ್ಯೂಸೆಕ್ ನೀರು ಹರಿದು ಬಂದಿದೆ.
ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿರುವುದು ಕಾರಣ ಕೃಷ್ಣಾ ನದಿ ಪಾತ್ರದ ಜನರಿಗೆ ಸಂತಸ ತಂದಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಮಳೆಯಿಂದ ಈ ಒಳಹರಿವು ಬಂದಿದ್ದು, ಇನ್ನೂ ಮಹಾರಾಷ್ಟ್ರದಿಂದ ಬಿಟ್ಟ ನೀರು ಬಂದಿಲ್ಲ.
ಕಳೆದ ವರ್ಷ ಮಳೆಯ ಅಭಾವ, ನೀರಿನ ಬರ ಅನುಭವಿಸದ ರೈತರಿಗೆ ಈ ಬಾರಿ ಅಣೆಕಟ್ಟಿಗೆ ನೀರು ಬಂದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಜಲಾಶಯ ಶೀಘ್ರ ಭರ್ತಿಯತ್ತ ಸಾಗಲಿ ಎಂಬುದು ರೈತರ ಅಪೇಕ್ಷೆಯಾಗಿದೆ.
ನೀರಿನ ಮಟ್ಟ: ೫೧೯.೬೦ ಮೀ ಗರಿಷ್ಠ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಶುಕ್ರವಾರ ೫೦೭.೭೯ ಮೀ.ವರೆಗೆ ನೀರು ಇತ್ತು. ೧೨೩.೦೮೧ ಟಿಎಂಸಿ ಅಡಿ ಗರಿಷ್ಠ ಸಂಗ್ರಹದ ಜಲಾಶಯದಲ್ಲಿ ೨೦.೬ ಟಿಎಂಸಿ ನೀರಿದೆ. ಅದರಲ್ಲಿ ಬಳಕೆ ಯೋಗ್ಯ ೩ ಟಿಎಂಸಿ ಅಡಿ ನೀರಿದೆ.

Next Article