ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಏ. ೨ರಂದು ಭಕ್ತರ ಸಭೆ ಕರೆದ ದಿಂಗಾಲೇಶ್ವರ ಶ್ರೀ

03:13 PM Mar 31, 2024 IST | Samyukta Karnataka

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಬದಲಾವಣೆಗೆ ಕೊಟ್ಟ ಗಡವು ಮುಕ್ತಾಯಗೊಂಡಿದೆ. ಹೀಗಾಗಿ ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏ.೨ ರಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದು ನಿರ್ಧಾರ ಪ್ರಕಟಿಸಲಾಗುವುದು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಮಠಾಧಿಶರು ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರಲ್ಲ. ಈ ನಿಟ್ಟಿನಲ್ಲಿ ನಾಡಿನ ವಿವಿಧ ಮಠಾಧೀಶರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂತೆಯೇ ಏ.೨ ರಂದು ಬೆಳಗ್ಗೆ ೧೦:೩೦ಕ್ಕೆ ಧಾರವಾಡದಲ್ಲಿ ಭಕ್ತರ ಸಭೆ ಕರೆಯಲಾಗಿದೆ. ಭಕ್ತರ ಅಭಿಪ್ರಾಯ ಪಡೆದ ನಂತರ ಮುಂದಿನ ನಡೆಯನ್ನು ತಿಳಿಸಲಾಗುವುದು. ಸಭೆ ನಡೆಯುವ ಸ್ಥಳವನ್ನು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದರು.

Next Article