For the best experience, open
https://m.samyuktakarnataka.in
on your mobile browser.

ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

11:54 AM Apr 16, 2024 IST | Samyukta Karnataka
ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್​​ವುಡ್​ ಹಿರಿಯ ನಟ, ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದ ದ್ವಾರಕೀಶ್ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಹಲವಾರು ಚಿತ್ರಗಳ ನಿರ್ಮಾಪಕರಾಗಿ, ನಿರ್ದೇಶಕರಾಗಿ, ನಟರಾಗಿ ಸೇವೆ ಸಲ್ಲಿಸಿದ್ದ ಅವರು, ಆಗಸ್ಟ್ ೧೯, ೧೯೪೨ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ್ದರು,
ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್‌ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಿದ್ದಾರೆ.​