ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನ್ನಡಿಗರು ಶ್ರಮದಿಂದ ಕಟ್ಟಿದ ಪ್ರತಿ ಸರ್ಕಾರಿ ಸಂಸ್ಥೆ ಲಾಭದ ಹಳಿಗೆ

06:11 PM Jan 02, 2024 IST | Samyukta Karnataka

ಬೆಂಗಳೂರು: ಕನ್ನಡಿಗರು ಶ್ರಮದಿಂದ ಕಟ್ಟಿದ ಪ್ರತಿ ಸರ್ಕಾರಿ ಸಂಸ್ಥೆಯನ್ನು ಲಾಭದ ಹಳಿಗೆ ತರಲು ನಾವು ಬದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ 2023ರ ಡಿಸೆಂಬರ್ ನಲ್ಲಿ ಒಟ್ಟು 852 ಟನ್ ಮಾರ್ಜಕ ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡಿ 40 ವರ್ಷಗಳಲ್ಲೇ ಹೊಸ ದಾಖಲೆ ನಿರ್ಮಿಸಿದೆ.
ಈ ಆರ್ಥಿಕ ವರ್ಷದ 9 ತಿಂಗಳುಗಳಲ್ಲೇ ಒಟ್ಟು ರೂ. 1,171 ಕೋಟಿ ವಹಿವಾಟು ನಡೆಸಿರುವುದು ಅಮೋಘ ಸಾಧನೆಯಾಗಿದೆ. ಒಂದೇ ಪಾಳಿಯಲ್ಲಿ ಹಾಗೂ ಒಂದು ಯಂತ್ರದ ಮೂಲಕ ನಡೆಯುತ್ತಿದ್ದ ಉತ್ಪಾದನೆಯನ್ನು ಮೂರು ಪಾಳಿ ಹಾಗೂ ಮೂರು ಯಂತ್ರಗಳಿಗೆ ವಿಸ್ತರಿಸಲಾಗಿದ್ದು, ಖಾಸಗಿ ಕಂಪೆನಿಗಳಿಗೆ ಸೆಡ್ಡು ಹೊಡೆಯುವಂತೆ ಕೆಎಸ್‌ಡಿಎಲ್ ಸಂಸ್ಥೆಯನ್ನು ಬಲಪಡಿಸಲಾಗಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಪ್ರತಿ ಸರ್ಕಾರಿ ಸಂಸ್ಥೆಯನ್ನು ಲಾಭದ ಹಳಿಗೆ ತರಲು ನಾವು ಬದ್ಧರಿದ್ದೇವೆ. ಇದು ನಮ್ಮವರ ಶ್ರಮ ಮತ್ತು ಬೆವರಿಗೆ ನಾವು ಕೊಡುವ ಗೌರವ ಎಂದಿದ್ದಾರೆ.

Next Article