ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರೆ ಮಾಡಿ ಹಣ‌ ಎಗರಿಸಿದ ಖದೀಮರು

07:20 PM Nov 11, 2023 IST | Samyukta Karnataka

ಬಾಗಲಕೋಟೆ: ಇಳಕಲ್ ನಗರದ ಮಹಿಳೆಯೋರ್ವಳಿಗೆ ಕರೆ ಮಾಡಿ ಅವರಿಂದ ಬ್ಯಾಂಕ್ ಖಾತೆ ನಂಬರ್ ಮತ್ತು ಎಟಿಎಂ ನಂಬರ್ ಪಡೆದುಕೊಂಡು ಹಣ ಎಗರಿಸಿದ ಘಟನೆ ನಡೆದಿದೆ.
ಸ್ಥಳೀಯ ಕೆನರಾ ಬ್ಯಾಂಕಿನಲ್ಲಿ ಖಾತೆ ಹೊಂದಿದ ಮಹಿಳೆಯಿಂದ ಅಕೌಂಟ್ ನಂಬರ್ ಮತ್ತು ಎಟಿಎಂ ಪಿನ್‌ಕೋಡ್ ಪಡೆದುಕೊಂಡು ಅವರ ಖಾತೆಯಲ್ಲಿನ ೨,೬೧,೦೦೦ ಹಣವನ್ನು ವರ್ಗಾವಣೆ ಮಾಡಿಕೊಂಡ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಅಪರಾಧ ವಿಭಾಗದ ಪಿಎಸ್‌ಐ ಶಾಂತಾ ಹಳ್ಳಿ ತನಿಖೆ ನಡೆಸಿದ್ದಾರೆ.

Next Article