ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕುಂದಾನಗರಿಯಲ್ಲಿ ಮೋದಿ...

11:25 PM Apr 27, 2024 IST | Samyukta Karnataka

ಬೆಳಗಾವಿ:  ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ವಾಗತಿಸಿದರು. ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ನಾಳೆ ಬೆಳಗ್ಗೆ ಅವರು ಬೆಳಗಾವಿ ನಗರದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿಗಳ​ ಪರ ಮತಬೇಟೆ ನಡೆಸಲಿದ್ದಾರೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್ ಹಾಗೂ ಅಣ್ಣಾಸಾಹೇಬ್ ಜೊಲ್ಲೆ ಅವರ ಪರ ಪ್ರಚಾರ ನಡೆಸಲಿದ್ದಾರೆ.
ಬೆಳಗ್ಗೆ 11.55ಕ್ಕೆ ಬೆಳಗಾವಿ ಹೆಲಿಪ್ಯಾಡ್​ನಿಂದ ಶಿರಸಿಗೆ ಪ್ರಯಾಣ ಶಿರಸಿ, ಉತ್ತರ ಕನ್ನಡ ಪ್ರಚಾರ ನಂತರ ಮಧ್ಯಾಹ್ನ ದಾವಣಗೆರೆಯಲ್ಲಿ  ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ  ಹೊಸಪೇಟೆ ಸಮಾವೇಶದಲ್ಲಿ ಭಾಗವಹಿಸಿ ರಾತ್ರಿ ಹೊಸಪೇಟೆಯಲ್ಲಿ ಮೋದಿ ವಾಸ್ತವ್ಯ ಮಾಡಲಿದ್ದಾರೆ

Next Article