ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ

10:21 PM Jun 10, 2024 IST | Samyukta Karnataka

ಶಿವಮೊಗ್ಗ: ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಇರುತ್ತದೆ. ನಾವು ಸೋತಿರಬಹುದು. ಈ ಕಾರಣಕ್ಕಾಗಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಯಾವ ಗ್ಯಾರಂಟಿಗಳನ್ನೂ ನಾವು ನಿಲ್ಲಿಸುವುದಿಲ್ಲ. ಸದ್ಯಕ್ಕೆ ಚುನಾವಣೆಯಲ್ಲಿ ನಡೆದ ತಂತ್ರ, ಕುತಂತ್ರದ ಬಗ್ಗೆಯೂ ನಾವು ಮಾತನಾಡುವುದಿಲ್ಲ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೂತ್ ಮಟ್ಟದಿಂದ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು.
ಉತ್ತರ ಭಾರತದಲ್ಲಿ ಬಿಜೆಪಿಗೆ ಒಲವು ಸಿಕ್ಕಿಲ್ಲ ಎಂಬುದು ಕೂಡ ಸತ್ಯ. ಕಾಂಗ್ರೆಸ್ ಸಮಾಧಾನಕರವಾದ ಸ್ಥಾನಗಳನ್ನು ಗೆದ್ದಿದೆ. ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿ, ಪಾಲಿಕೆ ಚುನಾವಣೆಗಳಿಗೆ ನಾವು ಮತ್ತೆ ಸಿದ್ಧವಾಗುತ್ತೇವೆ. ಸೋಲಿನ ಹೊಣೆ ಹೊತ್ತುಕೊಳ್ಳುವುದರ ಜೊತೆಗೆ ಮುಂದಿನ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ಯೋಚಿಸುತ್ತೇವೆ ಎಂದರು.

Next Article