For the best experience, open
https://m.samyuktakarnataka.in
on your mobile browser.

ಕನ್ನಡದ ಸ್ವಾಮೀಜಿ ಖ್ಯಾತಿಯ ಶ್ರೀಗಳು ಲಿಂಗೈಕ್ಯ

12:09 PM Nov 12, 2023 IST | Samyukta Karnataka
ಕನ್ನಡದ ಸ್ವಾಮೀಜಿ ಖ್ಯಾತಿಯ ಶ್ರೀಗಳು ಲಿಂಗೈಕ್ಯ

ಬೆಳಗಾವಿ: ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಚಿಂಚಣಿಯ ಅಲ್ಲಮಪ್ರಭು ಸಂಸ್ಥಾನ ಮಠದ ಪರಮ ಪೂಜ್ಯ ಅಲ್ಲಮ ಪ್ರಭುಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದಿಂದ ಚಿಂಚಣಿಯ ಅಲ್ಲಮಪ್ರಭು ಮಹಾಸ್ವಾಮೀಜಿ(63) ಲಿಂಗೈಕ್ಯರಾಗಿದ್ದು. ಇಂದು ಬೆಳಗಿನ ಜಾವ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದ ಶೋಕಸಾಗರದಲ್ಲಿ ಮುಳುಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಚಿಂಚಣಿ ಸಿದ್ದಪ್ರಭು ಸಂಸ್ಥಾನ ಮಠವಿದೆ.
ಶ್ರೀಗಳವರು ಬಸವ ತತ್ವಗಳನ್ನು ಪ್ರಚುರ ಪಡಿಸುತ್ತಲೇ ನಾಡು, ನುಡಿ ರಕ್ಷಣೆಗಾಗಿ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಕನ್ನಡ ಪ್ರಜ್ಞೆ ಮೂಡಿಸುತ್ತಾ ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದಾರೆ. ಅನೇಕ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
ಇಂದೇ ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠ ಮಾಹಿತಿ ನೀಡಿದೆ.