ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಅನುದಾನ

03:42 PM Jan 07, 2024 IST | Samyukta Karnataka

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿರುವ ಅವರು ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. 2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ. ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1,600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷ ಗೌರವವಾಗಿದೆ ಎಂದರು.

Next Article