For the best experience, open
https://m.samyuktakarnataka.in
on your mobile browser.

ಜಿಲ್ಲಾಧಿಕಾರಿಗಳಿಂದ ಚೆಕ್‌ಪೋಸ್ಟ್ ಪರಿಶೀಲನೆ

05:01 PM Mar 27, 2024 IST | Samyukta Karnataka
ಜಿಲ್ಲಾಧಿಕಾರಿಗಳಿಂದ ಚೆಕ್‌ಪೋಸ್ಟ್ ಪರಿಶೀಲನೆ

ಶ್ರೀರಂಗಪಟ್ಟಣ: ಲೋಕಸಭಾ ಚುನಾವಣಾ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕುಮಾರ ತಾಲೂಕಿನ ಗಡಿ ಭಾಗದ ವಿವಿದೆಡೆ ತೆರೆಯಲಾಗಿರುವ ಚೆಕ್‌ಪೋಸ್ಟ್‌ಗಳನ್ನು ಪರಿಶೀಲನೆ ನಡೆಸಿದರು.
ತಾಲೂಕಿನ ಕಳಸ್ತಾವಾಡಿ, ಮೊಗರಹಳ್ಳಿ ಮತ್ತು ಪೇಪರ್ ಮಿಲ್ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿದ ಅವರು, ಇಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯನಿರತ ಅಧಿಕಾರಿಗಳು, ಮತ್ತು ಸಿಬ್ಬಂದಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಮರ್ಪಕ‌ ತಪಾಸಣೆಯಲ್ಲಿ‌‌ ತೊಡಗುವಂತೆ ತಾಕೀತು‌ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸೇರಿದಂತೆ ತಾಲೂಕು‌ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.