For the best experience, open
https://m.samyuktakarnataka.in
on your mobile browser.

ತಾಂತ್ರಿಕ ದೋಷ: ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

11:34 AM Dec 15, 2023 IST | Samyukta Karnataka
ತಾಂತ್ರಿಕ ದೋಷ  ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಬೆಳಗ್ಗೆಯಿಂದ ಯಶವಂತಪುರದಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ನಾಗಸಂದ್ರದಿಂದ ಸಿಲ್ಕ್ ಇನ್​​ಸ್ಟಿಟ್ಯೂಟ್​ಗೆ​ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ. ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್‌ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ.