For the best experience, open
https://m.samyuktakarnataka.in
on your mobile browser.

ದಿಂಗಾಲೇಶ್ವರ ಶ್ರೀ ಸ್ಪರ್ಧೆ ಇಂದು ಚರ್ಚೆ

09:41 PM Mar 26, 2024 IST | Samyukta Karnataka
ದಿಂಗಾಲೇಶ್ವರ ಶ್ರೀ ಸ್ಪರ್ಧೆ ಇಂದು ಚರ್ಚೆ

ಹುಬ್ಬಳ್ಳಿ: ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ಮೂರುಸಾವಿರ ಮಠದ ಶಿವಾನುಭವ ಮಂಟಪದಲ್ಲಿ ಮಾ. ೨೭ರಂದು ಬೆಳಗ್ಗೆ ೯.೩೦ಕ್ಕೆ ನಾಡಿನ ವಿವಿಧ ಮಠಾಧೀಶರ ಚಿಂತನ ಮಂಥನ ಸಭೆ ಆಯೋಜಿಸಲಾಗಿದೆ ಎಂದು ಶಿರಹಟ್ಟಿ ಸಂಸ್ಥಾನ ಮಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ ಸಾಕಷ್ಟು ಭಕ್ತರು ಒತ್ತಾಯ ಮಾಡಿದ್ದರು. ಆದರೆ, ವೈಯಕ್ತಿಕವಾಗಿ ತೀರ್ಮಾನ ಕೈಗೊಳ್ಳುವ ಸ್ವಾತಂತ್ರ್ಯ ಮಠಾಧಿಪತಿಗಳಿಗಿಲ್ಲ. ಹೀಗಾಗಿ, ೨೭ರಂದು ನಡೆಯುವ ಮಠಾಧೀಶರ ಚಿಂತನ ಮಂಥನ ಸಭೆಯಲ್ಲಿ ಈ ವಿಷಯವೂ ಚರ್ಚೆಗೆ ಬರಬಹುದು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಣಯ ಪ್ರಕಟಿಸುವುದಾಗಿ ಶ್ರೀಗಳು ಹೇಳಿದರು.