For the best experience, open
https://m.samyuktakarnataka.in
on your mobile browser.

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ

04:07 PM Apr 18, 2024 IST | Samyukta Karnataka
ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಇಂದು ಸಲ್ಲಿಸಿದರು.
ಯಾವುದೇ ಮೆರವಣಿಗೆ ‌ಇಲ್ಲದೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸ್ವಾಮೀಜಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವಾಮೀಜಿಯಿಂದ ನಗರದ ಟೌನ್​ ಹಾಲ್​ನಿಂದ ಮೆರವಣಿಗೆ ನಡೆಯಬೇಕಿತ್ತು. ಆದರೆ, ಮರೆವಣಿಗೆ ಮಾಡದೆ ಮೊದಲು ಸಾಂಕೇತಿಕವಾಗಿ ಒಂದು ಸೆಟ್ ನಾಮಪತ್ರವನ್ನು ಅವರು ಸಲ್ಲಿಸಿದರು. ಬಳಿಕ ಮೆರವಣಿಗೆ ಮೂಲಕ‌ ಮತ್ತೊಮ್ಮೆ ಚುನಾವಣಾಧಿಕಾರಿಗಳ ಕಚೇರಿಗೆ ಬರಲಿದ್ದಾರೆ. ಈ ವೇಳೆ, ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಮೆರವಣಿಗೆ ಮಾಡಿ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಬಳಿಕ ಮಾಧ್ಯಮಗಳಿಗೆ ಹೆಚ್ಚಿನದನ್ನು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ಹೇಳಿ ತೆರಳಿದರು.