For the best experience, open
https://m.samyuktakarnataka.in
on your mobile browser.

ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ: ಪ್ರಿಯತಮ ರಾಹುಲ್ ಸಾವು

08:22 PM Jun 09, 2024 IST | Samyukta Karnataka
ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ  ಪ್ರಿಯತಮ ರಾಹುಲ್ ಸಾವು

ವಿಜಯಪುರ(ಢವಳಗಿ): ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಪ್ರೇಮ ಪ್ರಕರಣ ಹಿನ್ನೆಲೆ ತೀವ್ರವಾಗಿ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ರಾಹುಲ್ ರವಿವಾರ ಸಂಜೆ ೪ಕ್ಕೆ ಮೃತನಾಗಿದ್ದಾನೆ.
ಇಲ್ಲಿನ ಪುರಸಭೆ ಮಾಜಿ ಸದಸ್ಯ ರಾವುಜಪ್ಪ ಮದರಿ ಅವರ ಮನೆಯಲ್ಲಿ ಮೇ ೨೬ರಂದು ಸಂಜೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಎಂದು ವರದಿಯಾಗಿತ್ತು. ಶೇ. ೭೦ರಷ್ಟು ಬೆಂದು ಹೋಗಿದ್ದ ಪ್ರಿಯಕರ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ(೨೫) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ೧೨-೧೩ ದಿನಗಳ ನಂತರ ರವಿವಾರ ಸಾವನ್ನಪ್ಪಿದ್ದಾನೆ.
ಈ ಕುರಿತಂತೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಖಚಿತಪಡಿಸಿದ್ದಾರೆ. ರಾಹುಲ್ ಮದರಿ ಕುಟುಂಬದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಎರಡು ಮೂರು ವರ್ಷಗಳ ನಂತರ ಪ್ರೀತಿ ಮುರಿದುಬಿದ್ದು ಯುವತಿ ರಾಹುಲನಿಂದ ದೂರವಾಗಿದ್ದಳು. ಇದನ್ನು ಸಹಿಸದ ರಾಹುಲ್ ಮೇ ೨೬ರಂದು ಯುವತಿಯ ಮನೆಗೆ ಏಕಾಂಗಿಯಾಗಿ ಬಂದಿದ್ದಾಗ ಪೆಟ್ರೋಲ್ ಎರಚಿ ಬೆಂಕಿಹಚ್ಚಿದ ಘಟನೆ ನಡೆದಿತ್ತು. ಘಟನೆಯಲ್ಲಿ ಯುವತಿಯ ಚಿಕ್ಕಪ್ಪ ಮುತ್ತು ಮದರಿ, ಕೆಲಸಗಾರ ವಾಲಿಕಾರ ಕೂಡ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವತಿಯ ಚಿಕ್ಕಮ್ಮ ಮುತ್ತು ಅವರ ಪತ್ನಿ ಸೀಮಾ ಸಕಾಲಿಕ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಿಯಕರ ಮತ್ತು ಪ್ರಿಯತಮೆ ಎರಡೂ ಕಡೆಯವರಿಂದ ದೂರು, ಪ್ರತಿ ದೂರು ದಾಖಲಾಗಿದ್ದು ಯುವತಿಯ ತಂದೆಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.