For the best experience, open
https://m.samyuktakarnataka.in
on your mobile browser.

ಪೆಟ್ರೋಲ್, ಡೀಸೆಲ್ ದರ ಏರಿಕೆ ರಾಜ್ಯದ ಜನತೆಗೆ ಮಾಡಿದ ದ್ರೋಹ

08:17 PM Jun 15, 2024 IST | Samyukta Karnataka
ಪೆಟ್ರೋಲ್  ಡೀಸೆಲ್ ದರ ಏರಿಕೆ ರಾಜ್ಯದ ಜನತೆಗೆ ಮಾಡಿದ ದ್ರೋಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದು, ಈಗ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ದಾಗ ಡೀಸೆಲ್ ಬೆಲೆ 7 ರೂ. ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
ಈಗಾಗಲೇ ವಿದ್ಯುತ್ ದರ, ಮೋಟರ ವೆಹಿಕಲ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ನೇರ ಬರೆ ಎಳೆದಿದ್ದಾರೆ. ಬಜೆಟ್‌ನಲ್ಲಿ ಘೊಷಣೆ ಮಾಡದೇ, ಈಗ ಈ ರೀತಿ ಪೆಟ್ರೋಲ್, ಡೀಸೆಲ್ ದರ ಏರಿಸಿರುವುದು ಒಂದು ರೀತಿಯಲ್ಲಿ ಜನತೆಗೆ ದ್ರೋಹ ಮಾಡಿದಂತೆ. ನಾವು ಇದನ್ನು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ಸರ್ಕಾರ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.