ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಂಧಿಸಲು ತಾಕತ್ತು, ದಮ್ಮು ಇಲ್ಲದ ಕಾಂಗ್ರೆಸ್‌

02:26 PM Feb 29, 2024 IST | Samyukta Karnataka

ಬೆಂಗಳೂರು: ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಪಾಕಿಸ್ತಾನಕ್ಕೆ ಜೈಕಾರ ಕೂಗಿದವರನ್ನು ರಕ್ಷಿಸುತ್ತಾ ನೈತಿಕವಾಗಿ ಸಹ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಪವಿತ್ರ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೂಗಿದ ದೇಶದ್ರೋಹಿಯನ್ನು ಬಂಧಿಸಲು ತಾಕತ್ತು, ದಮ್ಮು ಇಲ್ಲದ ಕಾಂಗ್ರೆಸ್‌, ಪ್ರಕರಣದ ಸಾಕ್ಷಿಗಳನ್ನು ನಾಶಗೊಳಿಸಲು ಯತ್ನಿಸುತ್ತಿರುವುದು ಎಫ್.ಎಸ್.ಎಲ್‌ ವರದಿ ಬಗ್ಗೆ ಆ ಪಕ್ಷದ ನಾಯಕರು ನೀಡುತ್ತಿರುವ ಹೇಳಿಕೆಗಳೇ ಸಾಕ್ಷಿ.

ಹೇಳಿಕೆ ಬಗ್ಗೆ ವಿಡಿಯೋ ಸಾಕ್ಷಿ ಇದ್ದರೂ ದೇಶದ್ರೋಹಿಗಳನ್ನು ಬಂಧಿಸಲು ಎಫ್.ಎಸ್.ಎಲ್‌ ವರದಿ ಬರುವ ತನಕ ಕಾಯುತ್ತಿರುವುದು ಯಾವ ಪುರುಷಾರ್ಥ ಸಾಧನೆಗೆ..? ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಎಲ್ಲಾ ಪ್ರಕರಣಗಳಲ್ಲಿಯೂ ಎಫ್.ಎಸ್.ಎಲ್‌ ವರದಿ ಬಂದ ನಂತರವೇ ಅಪರಾಧಿಗಳನ್ನು ಬಂಧಿಸುತ್ತಿದ್ದಾರಾ..? ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಅಂತರಾಳದಲ್ಲಿ ಕನಿಷ್ಟ ದೇಶ ಪ್ರೇಮವಿದ್ದರೆ, ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಆ ದೇಶದ್ರೋಹಿಯನ್ನು ಮೊದಲು ಬಂಧಿಸಿ, ನಿಮಗೆ ಮತ ಹಾಕಿದ ಕನ್ನಡಿಗರಿಗೆ ಹಾಗೂ ಸಂವಿಧಾನಕ್ಕೆ ಗೌರವ ಸಲ್ಲಿಸಿ ಎಂದಿದ್ದಾರೆ.

Next Article