For the best experience, open
https://m.samyuktakarnataka.in
on your mobile browser.

ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

01:02 PM Apr 16, 2024 IST | Samyukta Karnataka
ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಲೋಕಸಭಾ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ರಮೇಶ ಜಿಗಜಿಣಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಮಧಲಾ ಮಾರುತಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಸಾಗಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ.ರವಿ, ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಇದ್ದರು.