For the best experience, open
https://m.samyuktakarnataka.in
on your mobile browser.

ರಾಜಕೀಯ ನಿವೃತ್ತಿ ಇಲ್ಲ

11:01 PM Apr 08, 2024 IST | Samyukta Karnataka
ರಾಜಕೀಯ ನಿವೃತ್ತಿ ಇಲ್ಲ

ಬೆಂಗಳೂರು: ತಾವು ರಾಜಕೀಯ ನಿವೃತ್ತಿಯ ಘೋಷಣೆ ಮಾಡಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿ ಸಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸ­ಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ಭಾನುವಾರ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡುತ್ತಾ ರಮೇಶ್ ಕುಮಾರ್ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ತಾವು ನಿಲ್ಲುವುದಿಲ್ಲ ಎಂಬ ಹೇಳಿಕೆ ನೀಡಿದ್ದರಲ್ಲದೆ, ಪ್ರಸಕ್ತ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿ­ಸಿದ್ದರು. ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಮಾತ್ರಕ್ಕೆ ಅದು ರಾಜಕೀಯ ನಿವೃತ್ತಿ ಅಂತಲ್ಲ ಎಂದಿದ್ದಾರೆ. ಇದರೊಂದಿಗೆ ರಮೇಶ‌ಕುಮಾರ್ ಅವರ ರಾಜಕೀಯ ನಿವೃತ್ತಿಯ ಸುದ್ದಿಗೆ ತೆರೆಬಿದ್ದಂತಾಗಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ, ರಮೇಶ್‌ಕುಮಾರ್ ಅವರು ಮುಂಬರುವ ಚುನಾವ­ಣೆಯಲ್ಲಿ ಸ್ಪರ್ಧಿಸದಿದ್ದರೂ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ. ಅವರು ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ.