ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

`ಸಂಪಾಯಿತಲೇ ಪರಾಕ್…'

07:27 PM Feb 26, 2024 IST | Samyukta Karnataka

ಹೂವಿನಹಡಗಲಿ(ಬಳ್ಳಾರಿ): ರಾಜ್ಯದ ಹೆಸರಾಂತ ಧಾರ್ಮಿಕ ಕ್ಷೇತ್ರ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವವು ಸೋಮವಾರ ಸಂಜೆ ೫:೩೦ಕ್ಕೆ ಗೋಧೂಳಿ ಸಮಯದಲ್ಲಿ ನಡೆಯಿತು.
ಕಪಿಲಮುನಿಗಳ ಪೀಠದ ಗುರುಗಳಾದ ಶ್ರೀಗುರು ವೆಂಕಪ್ಪಯ್ಯ ಒಡೆಯರ್ ಅವರಿಂದ ಆರ್ಶಿವಾದ ಪಡೆದು ಗೊರವಯ್ಯ ರಾಮಣ್ಣ ಸುಮಾರು ೧೫ಅಡಿ ಉದ್ದದ ಬಿಲ್ಲನ್ನು ಏರಿ, ನೆರೆದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ `ಸಂಪಾಯಿತಲೇ ಪರಾಕ್' ಎಂದು ದೇವವಾಣಿಯನ್ನು ನುಡಿದನು.
ದೇವವಾಣಿಯನ್ನು ಕೇಳುತ್ತಿದ್ದಂತೆಯೇ ಎಲ್ಲರ ಮನದಲ್ಲಿ ಸಂತೋಷ ಕಂಡುಬಂದಿತು. ವರ್ಷದ ಭವಿಷ್ಯವಾಣಿ ಎಂದೆ ಭಾವಿಸುವ ಕಾರ್ಣಿಕ ನುಡಿಯನ್ನು ನೆರೆದ ಭಕ್ತರು ತಮ್ಮದೆ ರೀತಿಯಲ್ಲಿ ವಿಶ್ಲೇಷಣೆ ಮಾಡಿದರು. ರೈತವರ್ಗ ಈಬಾರಿ ಮಳೆ ಬೆಳೆ ಚನ್ನಾಗಿ ಆಗುತ್ತದೆ ಎಂಬ ಆಶಾವಾದದಿಂದ ಸಂತಸಗೊಂಡರು.
೨೦೨೨ರಲ್ಲಿ ಸಹ ಇದೆ ಕಾರ್ಣಿಕ ನುಡಿಯು ಹೊರಬಿದ್ದಿತ್ತು. ಆ ವರ್ಷ ರಾಜ್ಯ ಸುಭಿಕ್ಷಯನ್ನು ಕಂಡಿತ್ತು.
ಈ ಭವಿಷ್ಯವಾಣಿಯಂತೆ ರಾಜ್ಯಕ್ಕೆ ಸಮೃದ್ಧಿ ಮಳೆ ಬೆಳೆ ಆಗಿ ಇದುವರೆಗೂ ರೈತಬಾಂಧವರು ಎದುರಿಸಿದ ಸಂಕಷ್ಟಗಳೆಲ್ಲ ದೂರಾಗಲಿವೆ. ರಾಜ್ಯ ರಾಜಕೀಯದಲ್ಲಿ ಯಾವ ಗೊಂದಲಗಳಿಲ್ಲದೆ ಸರ್ಕಾರ ಸುಭೀಕ್ಷೆಯಿಂದ ನಡೆಯುವುದು ಎಂದು ಕ್ಷೇತ್ರದ ಧರ್ಮಾಧಿಕಾರಿ ಶ್ರಿಗುರು ವೆಂಕಪ್ಪಯ್ಯ ಒಡೆಯರ್ ತಿಳಿಸಿದರು.

Next Article