For the best experience, open
https://m.samyuktakarnataka.in
on your mobile browser.

ಸಂಸ್ಕೃತಿ ಇಲಾಖೆ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ಟೆಂಗಿನಕಾಯಿ..!

12:03 PM Mar 27, 2024 IST | Samyukta Karnataka
ಸಂಸ್ಕೃತಿ ಇಲಾಖೆ ಸಚಿವರಿಗೆ ಸಂಸ್ಕೃತಿಯೇ ಇಲ್ಲ  ಟೆಂಗಿನಕಾಯಿ

ಹುಬ್ಬಳ್ಳಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಶಿವರಾಜ ತಂಗಡಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಬಾರದು. ಆಕಾಶಕ್ಕೆ ಉಗುಳಿದರೇ ಅದು ನಮ್ಮ ಮೇಲೆಯೇ ಬೀಳುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಕಾರಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳ ಬಗ್ಗೆ ಸಚಿವರು ಈ ರೀತಿಯ ಮಾತನಾಡುವುದು ಸರಿಯಲ್ಲ. ನಾಲಿಗೆಯ ಮೇಲೆ ಹಿಡಿತವಿರಬೇಕು. ಮೋದಿ, ಒಂದು ಸಮಾಜ ಹಾಗೂ ಸಮುದಾಯಕ್ಕೆ ಸೀಮಿತವಾದ ಪ್ರಧಾನಮಂತ್ರಿ ಅಲ್ಲ. ಅವರು ದೇಶದ ಪ್ರಧಾನಮಂತ್ರಿ ಈ ನಿಟ್ಟಿನಲ್ಲಿ ಮಾತನಾಡುವಾಗ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಮಾತನಾಡಬೇಕು ಎಂದರು.

ಕಾಂಗ್ರೆಸ್ ಆಂತರಿಕ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ಮುನ್ನವೇ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಭುಗಿಲೆದ್ದಿದೆ. ಚುನಾವಣೆ ನಂತರ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಆಘಾತ ಕಾದಿದೆ ಎಂದು ಭವಿಷ್ಯ ನುಡಿದರು.