ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಭಾಸ್ಥಳ ಸ್ವಚ್ಛಗೊಳಿಸಿದ ಮೈಸೂರು ಮಹಾರಾಜ

10:39 PM Apr 15, 2024 IST | Samyukta Karnataka

ಮೈಸೂರು: ಭಾನುವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ಮೈತ್ರಿ ಸಮಾವೇಶದ ಬಳಿಕ ಅಲ್ಲಿ ಕಂಡು ಬಂದಿದ್ದ ರಾಶಿ ರಾಶಿ ಕಸ ತೆರವುಗೊಳಿಸಲು ಅಭ್ಯರ್ಥಿ ಯದುವೀರ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಹಾಗು ಸ್ವಯಂಸೇವಕರ ತಂಡದೊಂದಿಗೆ ಶ್ರಮದಾನದಲ್ಲಿ ಭಾಗಿಯಾದರು. ಮೈದಾನದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪಾಲಿಕೆ ಸಿಬ್ಬಂದಿಗೆ ಈ ವೇಳೆ ಕೃತಜ್ಞತೆ ಸಲ್ಲಿಸಿದ ಯದುವೀರ್ ದಂಪತಿ, ಅವರ ಜೊತೆಗೂಡಿ, ಪಾಸ್ಟಿಕ್‌ಬಾಟಲುಗಳು, ವಿವಿಧ ಪ್ಯಾಕ್‌ನ ಕಸ, ಪೇಪರ್‌ಚೂರುಗಳು, ಪ್ಲಾಸ್ಟಿಕ್‌ಕವರ್ ಇತ್ಯಾದಿಗಳನ್ನು ಆಯ್ದು ತುಂಬಲು ನೆರವಾದರು.
ಈ ವೇಳೆ ಮಾತನಾಡಿದ ಯದುವೀರ್ ಅವರು, ನಗರವು ಯಾವಾಗಲೂ ಸ್ವಚ್ಛವಾಗಿರಬೇಕು. ಮೋದಿಜಿಯವರ ಬೃಹತ್ ಕಾರ್ಯಕ್ರಮದ ನಂತರ ಮೈದಾನವನ್ನು ಶುಚಿಗೊಳಿಸುವುದು ಸಹ ನನ್ನ ಕರ್ತವ್ಯ, ನಮ್ಮ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದೂ ಬಿಂಬಿಸಿದರು.

Next Article